ಕಾಂಗ್ರೆಸ್ ಸರ್ಕಾರ ಸಾಲ ತೆಗೆದು ಸೋನಿಯಾ ಗಾಂಧಿಗೆ ನೀಡಿದೆ: ಕಂಗನಾ ರಣಾವತ್

Update: 2024-09-23 06:02 GMT

ಬಿಜೆಪಿ ಸಂಸದೆ ಕಂಗನಾ ರಣಾವತ್ (Photo: PTI)

ಹೊಸದಿಲ್ಲಿ: ಹಿಮಾಚಲ ಪ್ರದೇಶ ಸರ್ಕಾರ ಸಾಲ ತೆಗೆದು ಅದನ್ನು ಸೋನಿಯಾ ಗಾಂಧಿಗೆ ಕೊಟ್ಟು ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಆರೋಪಿಸಿದ್ದಾರೆ.

ಶಿಮ್ಲಾದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಕಂಗನಾ ರಣಾವತ್, ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರಗಳು ರಾಜ್ಯಗಳ ಬೊಕ್ಕಸವನ್ನು ಖಾಲಿ ಮಾಡಿವೆ ಎಂದು ಎಲ್ಲರಿಗೂ ತಿಳಿದಿದೆ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಚುನಾವಣೆಗೆ "ಇಷ್ಟು" ಖರ್ಚು ಹೇಗೆ ಮಾಡುತ್ತದೆ ಎಂದು ಅವರು ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ.

ನಾವು ವಿಪತ್ತು ನಿಧಿಯನ್ನು ನೀಡಿದರೆ ಅದು ಸಿಎಂ ಪರಿಹಾರ ನಿಧಿಗೆ ಹೋಗಬೇಕು ಆದರೆ ಅದು ಸೋನಿಯಾ ಪರಿಹಾರ ನಿಧಿಗೆ ಹೋಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ. ಕಾಂಗ್ರೆಸ್ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯಲು ನಾನು ಜನರಿಗೆ ಮನವಿ ಮಾಡುತ್ತೇನೆ ಎಂದು ಕಂಗನಾ ರಣಾವತ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News