ಸಂಸತ್ ನಲ್ಲಿ ದ್ವೇಷ ಭಾಷಣ ಮಾಡಿದ ಬಿಜೆಪಿ ಸಂಸದ ಬಿಧುರಿಗೆ ಸೂಕ್ತ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರಧಾನಿಗೆ ದಾನಿಶ್ ಅಲಿ ಪತ್ರ

Update: 2023-09-29 15:46 GMT

ದಾನಿಶ್ ಅಲಿ | Photo: PTI 

ಹೊಸದಿಲ್ಲಿ: ಲೋಕಸಭೆಯಲ್ಲಿ ದ್ವೇಷ ಬಾಷಣ ಮಾಡಿದ ರಮೇಶ್ ಬಿಧುರಿ ಅವರ ನಡವಳಿಕೆ ಖಂಡಿಸಿ ಸಾರ್ವಜನಿಕ ಹೇಳಿಕೆ ನೀಡಬೇಕು ಹಾಗೂ ಅವರಿಗೆ ಸೂಕ್ತ ಶಿಕ್ಷೆ ನೀಡುವ ಖಾತರಿ ನೀಡಬೇಕು ಎಂದು ಬಿಎಸ್ಪಿ ಸಂಸದ ದಾನಿಶ್ ಅಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಅಲಿ ಅವರು, ತನಗೆ ಬೆದರಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಕೂಡ ಆಗ್ರಹಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದ ಸಂದರ್ಭ ಇತ್ತೀಚೆಗೆ ನಡೆದ ಘಟನೆ ಕೇವಲ ಒಬ್ಬ ವ್ಯಕ್ತಿಯಾದ ನನ್ನ ಮೇಲೆ ನಡೆದ ದಾಳಿಯಾಗಿರದೆ, ಪ್ರಜಾಪ್ರಭುತ್ವದ ಸತ್ವದ ಮೇಲೆ ನಡೆದ ದಾಳಿಯಾಗಿದೆ ಎಂದು ಅವರು ಹೇಳಿದ್ದಾರೆ. ಸಂಸತ್ನಲ್ಲಿ ಇತ್ತೀಚೆಗಿನ ನಡೆದ ಅವಮಾನಕರ ಘಟನೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಘಟನೆಯ ಕುರಿತು ಗಮನ ಹರಿಸುವಂತೆ ಪ್ರಧಾನಿ ಅವರಲ್ಲಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News