ಭಾರತದ ನೌಕಾಪಡೆಯ 8 ಮಾಜಿ ಸಿಬ್ಬಂದಿಯ ಮರಣದಂಡನೆ ಶಿಕ್ಷೆಯನ್ನು ಜೈಲು ಶಿಕ್ಷೆಗೆ ಕಡಿತಗೊಳಿಸಿದ ಖತರ್‌ ನ್ಯಾಯಾಲಯ

Update: 2023-12-28 10:42 GMT

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ಗೂಢಚರ್ಯೆ ಆರೋಪದ ಮೇಲೆ ಖತರ್‌ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗಳ ಶಿಕ್ಷೆಯನ್ನು ಕಡಿಮೆಗೊಳಿಸಲಾಗಿದೆ ಎಂದು ಭಾರತ ಸರ್ಕಾರ ಹೇಳಿದೆ.

ಈ ಕುರಿತ ತೀರ್ಪಿನ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ. ಬಹುತೇಕ ಅವರಿಗೆ ಹೆಚ್ಚಿನ ಜೈಲು ಶಿಕ್ಷೆ ವಿಧಿಸಬಹುದೆಂದು ಅಂದಾಜಿಸಲಾಗಿದೆ.

ಮುಂದಿನ ಹಂತಗಳ ಬಗ್ಗೆ ಚರ್ಚಿಸಲು ಕಾನೂನು ತಂಡ ಹಾಗೂ ಸಂಬಂಧಿತರ ಕುಟುಂಬ ಸದಸ್ಯರ ಜೊತೆಗೆ ಸಂಪರ್ಕದಲ್ಲಿರುವುದಾಗಿ ಭಾರತ ಸರ್ಕಾರ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News