ಜಾರ್ಖಂಡ್: ಗುಡುಗು ಮಳೆಗೆ ಎಂಟು ಜನರ ಸಾವು, 11 ಜನರಿಗೆ ಗಾಯ

Update: 2023-10-02 16:31 GMT

ಸಾಂದರ್ಭಿಕ ಚಿತ್ರ

ರಾಂಚಿ : ಜಾರ್ಖಂಡ್ ನ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆ ಮತ್ತು ಗುಡುಗುಸಿಡಿಲಿನಿಂದ ಕನಿಷ್ಠ ಎಂಟು ಜನರು ಮೃತಪಟ್ಟಿದ್ದು, 11 ಜನರು ಗಾಯಗೊಂಡಿದ್ದಾರೆ.

ಶನಿವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಾಜ್ಯದ ವಿವಿಧೆಡೆಗಳಲ್ಲಿ ಮನೆಗಳು ಮತ್ತು ರಸ್ತೆಗಳಿಗೆ ಹಾನಿಯುಂಟಾಗಿದ್ದು, ವಾಹನಗಳ ಸಂಚಾರಕ್ಕೆ ವ್ಯತ್ಯಯವುಂಟಾಗಿದೆ.

ರವಿವಾರ ಜಮ್ತಾರಾ ಜಿಲ್ಲೆಯ ನಾರಾಯಣಪುರದಲ್ಲಿ ಸಿಡಿಲಿನ ಆಘಾತದಿಂದ ಓರ್ವ ಮಹಿಳೆ ಮತ್ತು ಆಕೆಯ ಮೂವರು ಮಕ್ಕಳು ಮೃತಪಟ್ಟಿದ್ದು,ಇತರ ಇಬ್ಬರು ಗಾಯಗೊಂಡಿದ್ದಾರೆ. ರಾಂಚಿಯ ಲಾಲಪುರ ಪ್ರದೇಶದಲ್ಲಿ ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಯುವಕನೋರ್ವ ಕೊಚ್ಚಿಕೊಂಡು ಹೋಗಿದ್ದು, ಸೋಮವಾರ ಬೆಳಿಗ್ಗೆ ಆತನ ಮೃತದೇಹ ಪತ್ತೆಯಾಗಿದೆ.

ಬೊಕಾರೊ ಜಿಲ್ಲೆಯಲ್ಲಿ ಮಣ್ಣಿನ ಮನೆಯ ಗೋಡೆ ಕುಸಿದು ಮಗುವೊಂದು ಮೃತಪಟ್ಟಿದ್ದರೆ ಪಲಾಮು ಜಿಲ್ಲೆಯಲ್ಲಿ ಕೆರೆಯಲ್ಲಿ ಮುಳಗಿ ಇಬ್ಬರು ಬಾಲಕಿಯಯರು ಸಾವನ್ನಪ್ಪಿದ್ದಾರೆ. ಜಾರ್ಖಂಡ್ ನಾದ್ಯಂತ ಹಲವಾರು ನದಿಗಳಲ್ಲಿ ನೀರು ಅಪಾಯ ಮಟ್ಟವನ್ನು ತಲುಪಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News