ಜಾರ್ಖಂಡ್ | ಆಡಳಿತರೂಢ ಜೆಎಂಎಂನಿಂದ CAA, NRC, UCC ತಿರಸ್ಕರಿಸಿ ನಿರ್ಣಯ

Update: 2025-02-03 13:15 IST
Photo of Hemanth Soren

ಮುಖ್ಯಮಂತ್ರಿ ಹೇಮಂತ್ ಸೊರೇನ್ (Photo: PTI)

  • whatsapp icon

ರಾಂಚಿ: ಪೌರತ್ವ ತಿದ್ದುಪಡಿ ಕಾನೂನು, ಏಕರೂಪ ನಾಗರಿಕ ಸಂಹಿತೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಗೆ ವಿರೋಧ ಸೇರಿದಂತೆ ಜಾರ್ಖಂಡ್‌ನ ಆಡಳಿತರೂಢ ಜೆಎಂಎಂ ಪಕ್ಷವು ರಾಜ್ಯದಲ್ಲಿ 50 ಅಂಶಗಳ ನಿರ್ಣಯವನ್ನು ಕೈಗೊಂಡಿದೆ.

ಡುಮ್ಕಾದ ಗಾಂಧಿ ಮೈದಾನದಲ್ಲಿ ರವಿವಾರ ಆಯೋಜಿಸಿದ್ದ ಪಕ್ಷದ 46ನೇ ಸಂಸ್ಥಾಪಕ ದಿನಾಚರಣೆ ಸಮಾರಂಭದಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

‘CAA, NRC, UCCಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ತಿರಸ್ಕರಿಸಬೇಕು’ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ, ಮುಖ್ಯಮಂತ್ರಿ ಹೇಮಂತ್ ಸೊರೇನ್, ‘ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಜನತೆಗೆ ಮೋಸ ಮಾಡಲಾಗಿದೆ. ಜಾರ್ಖಂಡ್‌ನ ನಿವಾಸಿಗಳು ತಮ್ಮ ಕಾಲಿನ ಮೇಲೆ ನಿಲ್ಲುವುದನ್ನು ಊಳಿಗಮಾನ್ಯ ಮನಸ್ಥಿತಿ ಹೊಂದಿರುವ ಕೆಲವರು ಬಯಸುವುದಿಲ್ಲ," ಎಂದು ಕಿಡಿಕಾರಿದ್ದಾರೆ.

ಖನಿಜ ಸಂಪನ್ಮೂಲಗಳ ಮೂಲಕ ದೇಶದ ಬೊಕ್ಕಸಕ್ಕೆ ಹೆಚ್ಚಿನ ಕೊಡುಗೆ ನೀಡಿದರೂ ಜಾರ್ಖಂಡ್ ಅತ್ಯಂತ ಹಿಂದುಳಿದ ರಾಜ್ಯವಾಗಿದೆ. ನಾವು ಬಹಳಷ್ಟು ಕೊಡುಗೆ ನೀಡುತ್ತೇವೆ. ಆದರೆ ನಾವು ಏನನ್ನೂ ಪಡೆಯುವುದಿಲ್ಲ. ಕೇಂದ್ರವು ಎಲ್ಲಾ ರಾಜ್ಯಗಳನ್ನು ಸಮನಾಗಿ ನೋಡಬೇಕು. ನಮ್ಮ ಹಕ್ಕುಗಳಿಗಾಗಿ ನಾವು ಹೋರಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News