ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆ: ಬಿಜೆಪಿಗೆ ಸೇರ್ಪಡೆಯಾದ ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ

Update: 2024-03-09 09:18 GMT

Photo: PTI 

ಭೋಪಾಲ್: ಲೋಕಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಹಾಗೂ ಪಕ್ಷದ ಮಾಜಿ ಶಾಸಕರು ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಮಧ್ಯಪ್ರದೇಶ ಬಿಜೆಪಿ ಅಧ್ಯಕ್ಷ ವಿ.ಡಿ.ಶರ್ಮ ಹಾಗೂ ಮಾಜಿ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಉಪಸ್ಥಿತಿಯಲ್ಲಿ ಸುರೇಶ್ ಪಚೌರಿ, ಗಜೇಂದ್ರ ಸಿಂಗ್ ರಾಜುಖೇಡಿ ಹಾಗೂ ಮತ್ತಿತರ ನಾಯಕರು ಬಿಜೆಪಿಯ ಮುಖ್ಯ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿಗೆ ಸೇರ್ಪಡೆಯಾದ ನಾಯಕರ ಪೈಕಿ ಮಾಜಿ ಶಾಸಕರಾದ ಸಂಜಯ್ ಶುಕ್ಲಾ, ಅರ್ಜುನ್ ಪಾಲಿಯಾ, ವಿಶಾಲ್ ಪಟೇಲ್ ಕೂಡಾ ಸೇರಿದ್ದಾರೆ.

ಸುರೇಶ್ ಪಚೌರಿ ಗಾಂಧಿ ಕುಟುಂಬದ ನಿಕಟವರ್ತಿಗಳ ಪೈಕಿ ಒಬ್ಬರಾಗಿದ್ದು, ಕೇಂದ್ರ ರಕ್ಷಣಾ ಖಾತೆಯ ರಾಜ್ಯ ಸಚಿವರೂ ಆಗಿದ್ದರು

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News