ಡಿಸಿಎಂ ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ : ಕುನಾಲ್ ಕಾಮ್ರಾಗೆ ಮುಂಬೈ ಪೊಲೀಸರಿಂದ ಸಮನ್ಸ್
ಕಾಮಿಡಿಯನ್ ಕುನಾಲ್ ಕಾಮ್ರಾ (YouTube/Kunal Kamra)
ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕುರಿತ ಹೇಳಿಕೆಗೆ ಸಂಬಂಧಿಸಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಅವರಿಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.
ಮುಂಬೈ ಪೊಲೀಸರು ಕುನಾಲ್ ಕಾಮ್ರಾ ಅವರಿಗೆ ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.
ಏಕನಾಥ್ ಶಿಂಧೆ ಅವರ ವಿರುದ್ಧ ಕಾರ್ಯಕ್ರಮವೊಂದರಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಆರೋಪದಲ್ಲಿ ಶಿವಸೇನೆ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ MIDC ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದರು. ಬಳಿಕ ಪ್ರಕರಣವನ್ನು ಖಾರ್ ಪೊಲೀಸರಿಗೆ ವರ್ಗಾಯಿಸಲಾಗಿತ್ತು.
ಕುನಾಲ್ ಕಾಮ್ರಾ ಅವರ ಕಾರ್ಯಕ್ರಮವನ್ನು ಚಿತ್ರೀಕರಿಸಲಾಗಿದ್ದ ಮುಂಬೈನ ಖಾರ್ ಪ್ರದೇಶದ ಹ್ಯಾಬಿಟಾಟ್ ಸ್ಟುಡಿಯೊ ಮತ್ತು ಯುನಿಕಾಂಟಿನೆಂಟಲ್ ಹೋಟೆಲ್ಗೆ ಶಿಂಧೆ ನೇತೃತ್ವದ ಶಿವಸೇನಾ ಕಾರ್ಯಕರ್ತರು ಹಾನಿಗೊಳಿಸಿದರು. ಈ ಬಗ್ಗೆ ಶಿವಸೇನಾ ಕಾರ್ಯಕರ್ತರ ವಿರುದ್ಧವೂ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ.