ಲೋಕಸಭಾ ಚುನಾವಣೆ | ಸಮಾವೇಶಗಳಿಗೆ ಅನುಮತಿ ನೀಡುವ ಅರ್ಜಿಗಳನ್ನು ಮೂರು ದಿನಗಳಲ್ಲಿ ಇತ್ಯರ್ಥಕ್ಕೆ ಸುಪ್ರೀಂ ಆದೇಶ

Update: 2024-04-19 16:50 GMT

ಸುಪ್ರೀಂ | PC : PTI

ಹೊಸದಿಲ್ಲಿ : ಲೋಕಸಭಾ ಅಥವಾ ವಿಧಾನಸಭಾ ಚುನಾವಣೆಗಳಿಗೆ ಮುನ್ನ ಸಾರ್ವಜನಿಕ ಸಮಾವೇಶಗಳಿಗೆ ಅನುಮತಿ ಕೋರಿ ಸಲ್ಲಿಸಲಾಗುವ ಅರ್ಜಿಗಳ ಬಗ್ಗೆ ಮೂರು ದಿನಗಳಲ್ಲಿ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಜಿಲ್ಲೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಸಾಮಾಜಿಕ ಕಾರ್ಯಕರ್ತರಾದ ಅರುಣಾ ರಾಯ್ ಮತ್ತು ನಿಖಿಲ್ ಡೇ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಈ ನಿರ್ದೇಶನ ಹೊರಬಿದ್ದಿದೆ.

ಚುನಾವಣೆಗಳ ನಡುವೆ ಸಾರ್ವಜನಿಕ ಸಮಾವೇಶಕ್ಕೆ ಅನುಮತಿಯನ್ನು ಕೋರಿ ಯಾರಾದರೂ ಸಕ್ಷಮ ಪ್ರಾಧಿಕಾರಕ್ಕೆ ಅರ್ಜಿಯನ್ನು ಸಲ್ಲಿಸಿದರೆ ಅದನ್ನು ಮೂರು ದಿನಗಳಲ್ಲಿ ತೀರ್ಮಾನಿಸಬೇಕು ಎಂದು ಪೀಠವು ರಾಷ್ಟ್ರವ್ಯಾಪಿ ಅನ್ವಯಗೊಳ್ಳುವ ತನ್ನ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ಮುಂದಿನ ವಿಚಾರಣೆಯು ಎರಡು ವಾರಗಳ ನಂತರ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News