ಲೋಕಸಭಾ ಚುನಾವಣೆ: ಕೊಯಮತ್ತೂರಿನಿಂದ ಸ್ಪರ್ಧಿಸಲು ಕಮಲ್ ಹಾಸನ್ ಒಲವು

Update: 2023-09-22 16:20 GMT

ಕಮಲ್‌ ಹಾಸನ್‌ | Photo: PTI 

ಚೆನ್ನೈ: ಮುಂದಿನ ಲೋಕಸಭೆಯ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸುವ ಒಲವನ್ನು ಮಕ್ಕಳ್‌ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಹಾಗೂ ಚಿತ್ರ ನಟ ಕಮಲ್‌ ಹಾಸನ್‌ ಅವರು ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಪಕ್ಷದ ಕಾರ್ಯಕರ್ತರ ಜೊತೆ ಮಾತನಾಡಿದ ಅವರು, ‘ನನ್ನ ‘ವಿಕ್ರಂ’ ಸಿನಿಮಾ ನೋಡಲು ಬರುವ ಜನ, ನನಗೆ ಮತ ಹಾಕಲು ಯಾಕೆ ಬರಲಾರರು’ ಎಂದಿದ್ದಾರೆ.

2021ರ ಚುನಾವಣೆಯಲ್ಲಿ ಕೊಯಮತ್ತೂರು (ದಕ್ಷಿಣ) ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಮಲ್‌ ಹಾಸನ್‌ ಅವರು ಕಡಿಮೆ ಅಂತರದ ಮತಗಳಿಂದ ಸೋತಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಎಂಎನ್ಎಂ ಅಭ್ಯರ್ಥಿಗಳು 1 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಕ್ಷೇತ್ರಗಳಲ್ಲಿ ಕೊಯಮತ್ತೂರು ಕೂಡ ಒಂದು ಎಂಬುದು ವಿಶೇಷ. ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಜೊತೆಗೆ ಹೆಜ್ಜೆ ಹಾಕಿದ್ದ ಕಮಲ್‌ ಹಾಸನ್, ರಾಷ್ಟ್ರ ರಾಜಕಾರಣಕ್ಕೆ ಪ್ರವೇಶ ನೀಡಲಿರುವುದು ಅಬರ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News