ಮಹಾರಾಷ್ಟ್ರ | ಮತ್ತೊಂದು ‘ಹಿಟ್ ಆ್ಯಂಡ್ ರನ್ ಪ್ರಕರಣ’ ; ಯುವಕ ಸಾವು

Update: 2024-07-09 15:41 GMT

ಸಾಂದರ್ಭಿಕ ಚಿತ್ರ

ಮುಂಬೈ: ಮಹಾರಾಷ್ಟ್ರದ ನಾಗಪುರದಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಘಟನೆ ನಡೆದಿದೆ. ನಾಗಪುರ ನಗರದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿಯಾಗಿ 23 ವರ್ಷದ ಯುವಕನೋರ್ವ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕಾಟೋಲ್ ರಸ್ತೆ ಬೈಪಾಲ್ನಲ್ಲಿ ರವಿವಾರ ಅಪರಾಹ್ನ ಸುಮಾರು 12.20ಕ್ಕೆ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳದ ಸಮೀಪ ಸಿಸಿಟಿವಿ ಇಲ್ಲ ಎಂದು ಗಿಟ್ಟಿಖಾದನ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ತಿಳಿಸಿದ್ದಾರೆ.

ಅಪರಿಚಿತ ವಾಹನ ಢಿಕ್ಕಿಯಾಗಿ ಮೃತಪಟ್ಟ ಯುವಕನನ್ನು ಮಧ್ಯಪ್ರದೇಶದ ನಿವಾಸಿ ರಾಹುಲ್ ಕೈರ್ವಾರ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹಾಗೂ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈಯ ವರ್ಲಿಯಲ್ಲಿ ರವಿವಾರ ದಂಪತಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ಬಿಎಂಡಬ್ಲ್ಯು ಕಾರು ಢಿಕ್ಕಿಯಾಗಿತ್ತು. ಈ ಅಪಘಾತದಲ್ಲಿ ಕಾವೇರಿ ನಖ್ವಾ ಅವರು ಮೃತಪಟ್ಟದ್ದರು. ಅವರ ಪತಿ ಗಂಭೀರ ಗಾಯಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News