ಮುಂಗಾರು ಅಧಿವೇಶನ ಹಿನ್ನೆಲೆ: ಇಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರಕಾರ

Update: 2023-07-19 05:34 GMT

ಹೊಸದಿಲ್ಲಿ: ಜುಲೈ 20 ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸರಕಾರ ಬುಧವಾರ ಸರ್ವಪಕ್ಷ ಸಭೆಯನ್ನು ಕರೆದಿದೆ.

ಸರಕಾರದ ಹಿರಿಯ ಮಂತ್ರಿಗಳು ಭಾಗವಹಿಸುವ ಸಭೆಯಲ್ಲಿ ವಿವಿಧ ಪಕ್ಷಗಳು ತಮ್ಮ ಸಮಸ್ಯೆಗಳನ್ನು ಮಂಡಿಸಲಿದ್ದು, ಅಧಿವೇಶನ ಆರಂಭವಾಗುವ ಮುನ್ನಾದಿನದಂದು ಇದು ವಾಡಿಕೆಯಂತೆ ನಡೆಯುತ್ತದೆ. ಇಂತಹ ಹಲವು ಸಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದಾರೆ.

ರಾಜ್ಯಸಭಾಧ್ಯಕ್ಷ ಜಗದೀಪ್ ಧಂಖರ್ ಅವರು ಮಂಗಳವಾರ ಕರೆದಿದ್ದ ಇದೇ ರೀತಿಯ ಸರ್ವಪಕ್ಷ ಸಭೆಯನ್ನು ಹಲವು ಪಕ್ಷಗಳ ನಾಯಕರು ಗೈರುಹಾಜರಾದ ಕಾರಣ ಮುಂದೂಡಲಾಗಿದೆ. ಬೆಂಗಳೂರಿನಲ್ಲಿ ವಿರೋಧ ಪಕ್ಷಗಳು ಸಭೆ ನಡೆಸುತ್ತಿದ್ದರೆ, ರಾಷ್ಟ್ರ ರಾಜಧಾನಿಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸಭೆ ನಡೆಸಿದೆ.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News