ನಾಗಪುರ | ಬಿಜೆಪಿ ಕಾರ್ಯಕ್ರಮದಲ್ಲಿ ಕಾಲ್ತುಳಿತ, ಮಹಿಳೆ ಮೃತ್ಯು; ನಾಲ್ವರಿಗೆ ಗಾಯ

Update: 2024-03-09 16:18 GMT

Photo; PTI

ನಾಗಪುರ : ಮಹಾರಾಷ್ಟ್ರದ ನಾಗಪುರದಲ್ಲಿ ಶನಿವಾರ ಬಿಜೆಪಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತವುಂಟಾಗಿ 50 ವರ್ಷ ವಯಸ್ಸಿನ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಇತರ ನಾಲ್ವರು ಗಾಯಗೊಂಡಿದ್ದಾರೆ.

ರೇಶಿಮ್ಬಾಗ್ ಪ್ರದೇಶದಲ್ಲಿ ಬೆಳಗ್ಗೆ 10:30ರ ವೇಳೆಗೆ ಬಿಜೆಪಿಯು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪಾತ್ರೆಗಳನ್ನು ವಿತರಿಸಲಾಗುತ್ತಿತ್ತು. ಅವುಗಳನ್ನು ಪಡೆದುಕೊಳ್ಳಲು ಜನರು ಮುಗಿಬಿದ್ದುದರಿಂದ ಕಾಲ್ತುಳಿತ ಉಂಟಾಯಿತೆಂದು ಸಕ್ಕರ್ದಾರಾ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಮೃತಪಟ್ಚ ಮಹಿಳೆಯನ್ನು ಮನು ತುಳಸಿರಾಮ್ ಪ್ರಜಾಪತಿ ಎಂದು ಗುರುತಿಸಲಾಗಿದೆ. ಇತರ ನಾಲ್ವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಆಕಸ್ಮಿಕ ಸಾವೆಂದು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ತನಿಖೆಗೆ ಆದೇಶಿಸಿದ್ದಾರೆ ಎಂದವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News