ನೀತಿ ಆಯೋಗದ ಸಭೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಗೈರು

Update: 2024-07-27 08:00 GMT

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (PTI)

ಪಾಟ್ನಾ: ಶನಿವಾರ ಹೊಸದಿಲ್ಲಿಯಲ್ಲಿ ನಡೆಯುವ ನೀತಿ ಆಯೋಗದ ಸಭೆಗೆ ಬಿಹಾರ ಮುಖ್ಯಮಂತ್ರಿ ಹಾಜರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಬದಲಿಗೆ ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಹಾಗೂ ವಿಜಯ್ ಕುಮಾರ್ ಸಿನ್ಹಾ ಬಿಹಾರ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಮಹತ್ವದ ಸಭೆಗೆ ನಿತೀಶ್ ಕುಮಾರ್ ಗೈರಾಗಲು ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಯು ವಕ್ತಾರ ನೀರಜ್ ಕುಮಾರ್, “ಮುಖ್ಯಮಂತ್ರಿಗಳು ಇದೇ ಪ್ರಥಮ ಬಾರಿಗೆ ನೀತಿ ಆಯೋಗದ ಸಭೆಗೆ ಗೈರಾಗುತ್ತಿಲ್ಲ. ಈ ಹಿಂದೆಯೂ ಗೈರಾಗಿದ್ದಾರೆ. ಆಗೆಲ್ಲ ಅಂದಿನ ಉಪ ಮುಖ್ಯಮಂತ್ರಿಗಳು ಬಿಹಾರವನ್ನು ಪ್ರತಿನಿಧಿಸಿದ್ದರು. ಈ ಬಾರಿ ಕೂಡಾ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಇಬ್ಬರು ಉಪ ಮುಖ್ಯಮಂತ್ರಿಗಳು ತೆರಳಿದ್ದಾರೆ” ಎಂದು ಸ್ಪಷ್ಟೀಕರಣ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News