ಆಪರೇಶನ್ ಅಜಯ್ | ಇಸ್ರೇಲ್ ನಿಂದ ಕನ್ನಡಿಗರ ಸಹಿತ 212 ಭಾರತೀಯರ ಆಗಮನ
Update: 2023-10-13 04:56 GMT
ಹೊಸದಿಲ್ಲಿ, ಅ.13: ಇಸ್ರೇಲ್ ಮತ್ತು ಫೆಲೆಸ್ತೀನ್ ನ ಹಮಾಸ್ ನಡುವೆ ಸಂಘರ್ಷ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ಆರಂಭಗೊಂಡಿದೆ.
'ಆಪರೇಷನ್ ಅಜಯ್' ಕಾರ್ಯಾಚರಣೆಯಡಿಯಲ್ಲಿ ಇಸ್ರೇಲ್ನಿಂದ ಹೊರಟ ಮೊದಲ ವಿಮಾನದಲ್ಲಿ ಇಂದು ಬೆಳಗ್ಗೆ ಹೊಸದಿಲ್ಲಿಗೆ ಬಂದಿಳಿದ ಒಟ್ಟು 212 ಭಾರತೀಯರು ತಾಯ್ನಾಡಿಗೆ ಬಂದಿಳಿದಿದ್ದಾರೆ. ಹೊಸದಿಲ್ಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು.
ಈ ವಿಮಾನದಲ್ಲಿ ಆಗಮಿಸಿದ ಕನ್ನಡಿಗರನ್ನು ಕರ್ನಾಟಕ ಸರಕಾರದ ದಿಲ್ಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ರಾಜ್ಯ ಸರಕಾರದ ಪರವಾಗಿ ಬರಮಾಡಿಕೊಂಡು ಕುಶಲೋಪರಿ ವಿಚಾರಿಸಿದರು.