ಪ್ರಧಾನಿ ಮೋದಿಗೆ ಅಭದ್ರತೆ ಕಾಡುತ್ತಿದೆ: ಕಾಂಗ್ರೆಸ್

Update: 2024-02-06 15:57 GMT

ಜೈರಾಮ್ ರಮೇಶ್ | Photo: PTI

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭದ್ರತೆ ಕಾಡುತ್ತಿರುವುದರಿಂದ ಅವರು ಜವಾಹರ್ ಲಾಲ್ ನೆಹರೂ ವಿರುದ್ಧ ಕೆಟ್ಟ ಟೀಕೆಗಳನ್ನು ಮಾಡುತ್ತಾರೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಸೋಮವಾರ ಮಾಜಿ ಪ್ರಧಾನಿ ನೆಹರೂ ಹಾಗೂ ಇಂದಿರಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ಬಳಿಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ. ಅಡ್ವಾಣಿ ಅವರು ಕೂಡ ನೆಹರೂ ಬಗ್ಗೆ ರೀತಿ ಕೆಟ್ಟ ಮಾತುಗಳನ್ನು ಆಡುತ್ತಿರಲಿಲ್ಲ. ಮೋದಿ ಅವರು ಈ ರೀತಿಯ ಕೆಟ್ಟ ಟೀಕೆಗಳ ಮೂಲಕ ಅವರ ಹುದ್ದೆಗೆ ಅವಮಾನ ಮಾಡುತ್ತಿದ್ದಾರೆ ಎಂದಿದ್ದಾರೆ.

ಮೋದಿ ಅವರು ತಮ್ಮನ್ನು ತಾವು ಬುದ್ದಿವಂತ ಎಂದು ಭಾವಿಸಿದ್ದಾರೆ. ಆದರೆ, ವಾಸ್ತವವಾಗಿ ಅವರು ಹೊಂದಿರುವ ಹುದ್ದೆಯನ್ನು ಅವಮಾನಿಸುತ್ತಿದ್ದಾರೆ. ಸ್ವಪ್ರತಿಷ್ಠೆ ಹಾಗೂ ನೆಹರೂ ಫೋಬಿಯಾದ ವಿಷಕಾರಿ ಮಿಶ್ರಣ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ನಾಶಕ್ಕೆ ಕಾರಣವಾಗುತ್ತಿದೆ ಎಂದು ಜೈರಾಮ್ ರಮೇಶ್ ಅವರು ‘ಎಕ್ಸ್’ನ ಪೋಸ್ಟ್ ನಲ್ಲಿ ಹೇಳಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News