ಪುಣೆ : ಮೇಣದಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 6 ಮಂದಿ ಸಾವು

Update: 2023-12-08 12:09 GMT

Photo: NDTV

ಪುಣೆ: ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿ ಶುಕ್ರವಾರದಂದು ಮೇಣದಬತ್ತಿ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಆರು ಮಂದಿ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ndtv ವರದಿ ಮಾಡಿದೆ.

ಮಧ್ಯಾಹ್ನ 2.45 ರ ಸುಮಾರಿಗೆ ತಲವಾಡೆಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿತು ಎಂದು ಪಿಂಪ್ರಿ-ಚಿಂಚ್‌ವಾಡ್ ಪುರಸಭೆಯ ಆಯುಕ್ತ ಶೇಖರ್ ಸಿಂಗ್ ಹೇಳಿದ್ದಾರೆ.

ಹುಟ್ಟುಹಬ್ಬದ ಆಚರಣೆಗಳಿಗೆ ಬಳಸಲಾಗುವ ವಿಶೇಷ ಮೇಣದಬತ್ತಿಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ.

ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಗಾಯಾಳುಗಳನ್ನು ಪುಣೆ ಮತ್ತು ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೋರೇಷನ್ ಪ್ರದೇಶದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News