ರತನ್ ಟಾಟಾ ನಿಧನಕ್ಕೆ ಮೋದಿ,ರಾಹುಲ್ ಸೇರಿದಂತೆ ಗಣ್ಯರ ಸಂತಾಪ

Update: 2024-10-10 15:25 GMT

ರತನ್ ಟಾಟಾ , ಪ್ರಧಾನಿ ನರೇಂದ್ರ ಮೋದಿ ,ರಾಹುಲ್ ಗಾಂಧಿ | PTI

ಹೊಸದಿಲ್ಲಿ : ಹಿರಿಯ ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್‌ನ ಗೌರವಾಧ್ಯಕ್ಷ ರತನ್ ಟಾಟಾ ಅವರ ನಿಧನಕ್ಕೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರು,ಅವರನ್ನು ದೂರದೃಷ್ಟಿಯ ಉದ್ಯಮ ನಾಯಕ ಹಾಗೂ ಮಾನವೀಯ ವ್ಯಕ್ತಿ ಎಂದು ಬಣ್ಣಿಸಿದ್ದಾರೆ.

‘ರತನ್ ಟಾಟಾ ಓರ್ವ ಅಸಾಧಾರಣ ವ್ಯಕ್ತಿಯಾಗಿದ್ದರು. ಅವರು ಭಾರತದ ಅತ್ಯಂತ ಹಳೆಯ ಮತ್ತು ಅತ್ಯಂತ ಪ್ರತಿಷ್ಠಿತ ಉದ್ಯಮ ಸಮೂಹಕ್ಕೆ ಸ್ಥಿರವಾದ ನಾಯಕತ್ವವನ್ನು ಒದಗಿಸಿದ್ದರು’ ಎಂದು ಮೋದಿ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

‘ಕಾರ್ಪೊರೇಟ್ ಬೆಳವಣಿಗೆಯನ್ನು ರಾಷ್ಟ್ರನಿರ್ಮಾಣದೊಂದಿಗೆ ಮತ್ತು ಶ್ರೇಷ್ಠತೆಯನ್ನು ನೈತಿಕತೆಯೊಂದಿಗೆ ಬೆರೆಸಿದ್ದ ರತನ್ ಟಾಟಾರ ನಿಧನದಿಂದಾಗಿ ನಾವು ಓರ್ವ ಆದರ್ಶ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ ’ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

‘ರತನ್ ಟಾಟಾ ದೂರದೃಷ್ಟಿಯ ವ್ಯಕ್ತಿಯಾಗಿದ್ದರು. ಅವರು ಉದ್ಯಮ ಮತ್ತು ಲೋಕೋಪಕಾರ ಎರಡರಲ್ಲೂ ತನ್ನದೇ ಆದ ಶಾಶ್ವತವಾದ ಛಾಪನ್ನು ಮೂಡಿಸಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.

ಹಿರಿಯ ಬಿಜೆಪಿ ನಾಯಕ ಎಲ್.ಕೆ.ಆಡ್ವಾಣಿ, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವಾರು ಗಣ್ಯರು ರತನ್ ಟಾಟಾ ನಿಧನಕ್ಕೆ ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News