ದಿಲ್ಲಿ-ಮೀರತ್ ಎಕ್ಸ್ ಪ್ರೆಸ್ ವೇ ನಲ್ಲಿ ಶಾಲಾ ಬಸ್-ಕಾರಿನ ನಡುವೆ ಢಿಕ್ಕಿ, ಆರು ಮಂದಿ ಮೃತ್ಯು

Update: 2023-07-11 05:04 GMT

ಹೊಸದಿಲ್ಲಿ: ಉತ್ತರಪ್ರದೇಶದ ಗಾಝಿಯಾಬಾದ್ ನ ದಿಲ್ಲಿ-ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಶಾಲಾ ಬಸ್ ವೊಂದು ಕಾರಿಗೆ ಢಿಕ್ಕಿಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ.

ಯಾವ ಪ್ರಯಾಣಿಕರಿಲ್ಲದ ಬಸ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದು, ಮಂಗಳವಾರ ಬೆಳಗ್ಗೆ ದಿಲ್ಲಿ-ಮೀರತ್ ಎಕ್ಸ್ ಪ್ರೆಸ್ ವೇ ನಲ್ಲಿ ಕಾರಿಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಮೃತಪಟ್ಟವರೆಲ್ಲರೂ ಕಾರಿನ ಪ್ರಯಾಣಿಕರಾಗಿದ್ದು, ಎಲ್ಲರೂ ಗುರುಗ್ರಾಮಕ್ಕೆ ತೆರಳುತ್ತಿದ್ದರು.

8 ಮಂದಿಯ ಪೈಕಿ ಆರು ಮಂದಿ ಮೃತಪಟ್ಟಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವಿಚಾರಣೆ ನಡಸಲಾಗುತ್ತಿದೆ ಎಂದು ಗಾಝಿಯಾಬಾದ್ ಉಪ ಪೊಲೀಸ್ ಆಯುಕ್ತರಾದ ಶುಭಂ ಪಟೇಲ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News