ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಶಿಖರ್ ಧವನ್ ಅಲಭ್ಯ

Update: 2024-04-25 16:48 GMT

ಹೊಸದಿಲ್ಲಿ : ಭುಜ ನೋವಿನಿಂದ ಬಳಲುತ್ತಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್, ಶುಕ್ರವಾರ ನಡೆಯಲಿರುವ ಕೋಲ್ಕತ ನೈಟ್ ರೈಡರ್ಸ್ ತಂಡದ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲೂ ಆಡುವುದಿಲ್ಲ. ಮೇ ಒಂದರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಶಿಖರ ಧವನ್ ಮರಳುವ ಬಗ್ಗೆ ತಂಡವು ಆಶಾಭಾವ ಹೊಂದಿದೆ.

38 ವರ್ಷದ ಧವನ್ ಕೊನೆಯದಾಗಿ ಎಪ್ರಿಲ್ 9ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆಡಿದ್ದರು. ಆ ಬಳಿಕ ನಡೆದ ಮೂರು ಪಂದ್ಯಗಳಿಂದ ಅವರು ಹೊರಗಿದ್ದರು. ಅವರ ಅನುಪಸ್ಥಿತಿಯಲ್ಲಿ ಸ್ಯಾಮ್ ಕರನ್ ತಂಡವನ್ನು ಮುನ್ನಡೆಸಿದ್ದರು.

ಧವನ್ ಈಗ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪಂಜಾಬ್ ಕಿಂಗ್ಸ್ ನ ಸ್ಪಿನ್ ಬೌಲಿಂಗ್ ಕೋಚ್ ಸುನೀಲ್ ಜೋಶಿ ತಿಳಿಸಿದ್ದಾರೆ. ಚೆನ್ನೈನಲ್ಲಿ ನಡೆಯಲಿರುವ ಪಂದ್ಯಕ್ಕೆ ಅವರು ಲಭ್ಯರಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News