ನೀತಿ ಸಂಹಿತೆ ಉಲ್ಲಂಘಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

Update: 2024-04-12 08:47 GMT

ಕೆ.ಅಣ್ಣಾಮಲೈ (PTI)

ಚೆನ್ನೈ: ಚುನಾವಣಾ ಪ್ರಚಾರದ ಕಾಲಮಿತಿಯನ್ನು ಮೀರಿ ಅವರಂಪಾಳ್ಯಂ ಪ್ರದೇಶದಲ್ಲಿ ಕಳೆದ ರಾತ್ರಿ ಪ್ರಚಾರ ನಡೆಸಿದ ಆರೋಪದ ಮೇಲೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹಾಗೂ ಕೊಯಂಬತ್ತೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಮೇಶ್ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ರಾತ್ರಿ 10 ಗಂಟೆಯೊಳಗೆ ಅಭ್ಯರ್ಥಿಗಳು ತಮ್ಮ ಚುನಾವಣಾ ಪ್ರಚಾರವನ್ನು ಅಂತ್ಯಗೊಳಿಸಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News