ಟಿಎಂಸಿ ನಾಯಕನ ಗುಂಡಿಕ್ಕಿ ಹತ್ಯೆ

Update: 2024-02-26 09:15 GMT

ಸಾಂದರ್ಭಿಕ ಚಿತ್ರ (PTI)

ಕೋಲ್ಕತ್ತಾ: 49 ವರ್ಷದ ತೃಣಮೂಲ ಕಾಂಗ್ರೆಸ್ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಶೋಕ್‌ನಗರದಲ್ಲಿ ನಡೆದಿದೆ. ರವಿವಾರ ರಾತ್ರಿ ಭೂ ವ್ಯಾಜ್ಯವೊಂದರ ಕುರಿತು ವಾಗ್ವಾದ ನಡೆದಾಗ ದುಷ್ಕರ್ಮಿಗಳ ಗುಂಪೊಂದು ಈ ಕೃತ್ಯವೆಸಗಿದೆ ಎಂದು ವರದಿಯಾಗಿದೆ.

ಮೃತ ಟಿಎಂಸಿ ನಾಯಕನನ್ನು ಬಿಜನ್ ದಾಸ್ ಎಂದು ಗುರುತಿಸಲಾಗಿದ್ದು, ತಮ್ಮ ಪಕ್ಷದ ಸಹೋದ್ಯೋಗಿಯೊಬ್ಬರ ನಿವಾಸಕ್ಕೆ ಹುಟ್ಟುಹಬ್ಬದ ಭೋಜನ ಕೂಟದಲ್ಲಿ ಪಾಲ್ಗೊಳ್ಳಲು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೋಜನ ಕೂಟದಲ್ಲಿನ ಕಲಹದಿಂದಾಗಿ ಈ ಕೃತ್ಯ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೆ ಸ್ಥಳೀಯ ನಿವಾಸಿಗಳು ಆರೋಪಿ ಗೌತಮ್ ದಾಸ್ ನಿವಾಸವನ್ನು ಧ್ವಂಸಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News