ಮಣಿಪುರ ವಿಚಾರದಲ್ಲಿ ಗದ್ದಲ: ಎಎಪಿ ಸಂಸದ ಸಂಜಯ್ ಸಿಂಗ್ ಮುಂಗಾರು ಅಧಿವೇಶನದಿಂದ ಅಮಾನತು

Update: 2023-07-24 07:11 GMT

ಹೊಸದಿಲ್ಲಿ: ಮಣಿಪುರ ವಿಷಯದ ಕುರಿತು ಸೋಮವಾರ ರಾಜ್ಯಸಭೆಯಲ್ಲಿ ಗದ್ದಲ ಉಂಟಾಯಿತು, "ಪದೇಪದೇ ಸಭಾಧ್ಯಕ್ಷರ ನಿರ್ದೇಶನಗಳನ್ನು ಉಲ್ಲಂಘಿಸಿದ"  ತಪ್ಪಿಗೆಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಮುಂಗಾರು ಅಧಿವೇಶನದ ಸಂಪೂರ್ಣ ಅವಧಿಗೆ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು ಅಮಾನತುಗೊಳಿಸಿದ್ದಾರೆ. ಅಮಾನತುಗೊಳ್ಳುವ ಮೊದಲು ಸಂಜಯ್ ಸಿಂಗ್ ಅವರು ಸದನದ ಬಾವಿಯಲ್ಲಿ ಕಾಣಿಸಿಕೊಂಡರು.

ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಹಾಗೂ ಸರಕಾರದ ನಡುವಿನ ನಿರಂತರ ವಾಗ್ವಾದದಲ್ಲಿ, ಸಂಸತ್ತಿನ ಉಭಯ ಸದನಗಳನ್ನು ಇಂದು ಮುಂದೂಡಲಾಯಿತು.

ರಾಜ್ಯಸಭೆಯನ್ನು ಮಧ್ಯಾಹ್ನ 2 ಗಂಟೆಗೆ, ಲೋಕಸಭೆಯನ್ನು 2 ಗಂಟೆಗೆ ಮುಂದೂಡಲಾಯಿತು.

ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಏನು ಹೇಳಿದ್ದಾರೆ ಎಂಬುದರ ಕುರಿತು ಆಡಿಯೊ ಸ್ಪಷ್ಟವಾಗಿಲ್ಲದಿದ್ದರೂ, ಅಧ್ಯಕ್ಷ ಜಗದೀಪ್ ಧನಕರ್ ಅವರು ಒಬ್ರಯಾನ್ ಗೆ ಛೀಮಾರಿ ಹಾಕಿದರು,

“ನೀವು ಅಧ್ಯಕ್ಷರಿಗೆ ಸವಾಲು ಹಾಕುತ್ತಿದ್ದೀರಿ” ಎಂದು ಧನಕರ್ ಹೇಳಿದರು.

ಇದಾದ ಕೆಲವೇ ಹೊತ್ತಿನಲ್ಲಿ ಗದ್ದಲದ ನಡುವೆಯೇ ಮೇಲ್ಮನೆ ಕಲಾಪವನ್ನು ಮುಂದೂಡಲಾಯಿತು. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಮಣಿಪುರ ವಿಷಯದ ಬಗ್ಗೆ ಚರ್ಚೆ ನಡೆಸಲು ಸದನ ಸಿದ್ಧವಾಗಿದೆ, ಆದರೆ ಯಾರು ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಪ್ರತಿಪಕ್ಷಗಳು ನಿರ್ಧರಿಸುವುದಿಲ್ಲ ಎಂದರು..

ವಿರೋಧ ಪಕ್ಷದ ಇಂಡಿಯಾ ಹಾಗೂ ಭಾರತೀಯ ಜನತಾ ಪಕ್ಷ (ಬಿಜೆಪಿ) ಸಂಸದರು ಇಂದು ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು:

ಸಂಸತ್ತಿನಲ್ಲಿ ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಪಕ್ಷಗಳು ಒತ್ತಾಯಿಸಿದರೆ, ಬಿಜೆಪಿ ಸಂಸದರು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಅಪರಾಧಗಳ ಹೆಚ್ಚಳವನ್ನು ಪ್ರತಿಭಟಿಸಿದರು

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News