ಗಾಝಾ ಮೇಲಿನ ಇಸ್ರೇಲ್ ದಾಳಿಯನ್ನು ಶ‍್ಲಾಘಿಸಿದ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್

Update: 2023-11-01 18:27 GMT

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ Photo- PTI

ಜೈಪುರ: ಇಸ್ರೇಲ್-ಹಮಾಸ್ ನಡುವೆ ಕದನ ನಡೆಯುತ್ತಿರುವ ಹೊತ್ತಿನಲ್ಲೇ ಗಾಝಾ ಮೇಲಿನ ಇಸ್ರೇಲ್ ದಾಳಿಯನ್ನು ಶ್ಲಾಘಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಮಧ್ಯಪ್ರಾಚ್ಯ ದೇಶವಾದ ಇಸ್ರೇಲ್ ತಾಲಿಬಾನಿ ಮನಸ್ಥಿತಿಯನ್ನು ತುಳಿದು ಹಾಕುತ್ತಿದೆ ಎಂದು ಕೊಂಡಾಡಿದ್ದಾರೆ ಎಂದು indiatoday.in ವರದಿ ಮಾಡಿದೆ.

ಚುನಾವಣಾ ರಾಜ್ಯವಾದ ರಾಜಸ್ಥಾನದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, “ಹನುಮಂತನ ಗದೆಗೆ ಮಾತ್ರವೇ ತಾಲಿಬಾನಿಗಳನ್ನು ನಿರ್ಮೂಲನೆ ಮಾಡಲು ಸಾಧ್ಯ” ಎಂದು ಇಸ್ರೇಲ್-ಹಮಾಸ್ ನಡುವಿನ ಕದನವನ್ನು ಉಲ್ಲೇಖಿಸಿ ಹೇಳಿದ್ದಾರೆ.

“ಇಸ್ರೇಲ್ ತಾಲಿಬಾನಿ ಮನಸ್ಥಿತಿಗಳನ್ನು ಹೇಗೆ ದಮನ ಮಾಡುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಲ್ಲವೆ?” ಎಂದು ಅವರು ಸಾರ್ವಜನಿಕರನ್ನುದ್ದೇಶಿಸಿ ಪ್ರಶ್ನಿಸಿದ್ದಾರೆ.

“ಅವರು ತಮ್ಮ ಗುರಿಗಳನ್ನು ತಲುಪಲು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ” ಎಂದೂ ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News