ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2016-03-22 18:16 GMT

ಉಡುಪಿ, ಮಾ.22: ಸಂತೆಕಟ್ಟೆಯ ರೋಬೊಸಾಫ್ಟ್ ಸಂಸ್ಥೆಯ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿರುವ ಮರಕ್ಕೆ ಅಪರಿಚಿತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
25ವರ್ಷ ಪ್ರಾಯದ ಯುವಕನ ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    
 ಬಂಟ್ವಾಳ: ವ್ಯಕ್ತಿಯೊಬ್ಬರು ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದು ಗ್ರಾಮದ ಫರಂಗಿಪೇಟೆಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. ಮಂಗಳೂರು ಮಣ್ಣಗುಡ್ಡೆ ನಿವಾಸಿ ದಿನಕರ(35) ಆತ್ಮಹತ್ಯೆ ಮಾಡಿಕೊಂಡಾತ. ಮಂಗಳವಾರ ಬೆಳಗ್ಗೆ ಫರಂಗಿಪೇಟೆ ರೈಲ್ವೇ ಹಳಿ ಸಮೀಪ ರೈಲ್ವೆ ಇಲಾಖೆಗೆ ಸೇರಿದ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲನೆ ವೇಳೆ ಮೃತವ್ಯಕ್ತಿ ಮಂಗಳೂರು ನಿವಾಸಿ ಎಂದು ತಿಳಿದು ಬಂದಿದ್ದು, ಮನೆಮಂದಿಗೆ ಮಾಹಿತಿ ನೀಡಲಾಗಿದೆ. ವಿಪರೀತ ಮದ್ಯ ಸೇವನೆಯ ಚಟದಿಂದ ಈ ಕೃತ್ಯವೆಸಗಿರಬಹುದೆಂದು ಮೃತರ ತಂದೆ ಜಯಂತ ಶೇಣವ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News