ಶಿವಳ್ಳಿ ತುಳು ಕಾರ್ಯಾಗಾರ
Update: 2016-03-22 18:51 GMT
ಸುಳ್ಯ, ಮಾ.22: ಸುಳ್ಯದ ಶಿವಳ್ಳಿ ಸಂಪನ್ನ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಸಹಯೋಗದಲ್ಲಿ ‘ನಮ್ಮ ತುಳು ಆನಿ-ಇನಿ-ನಣ’ ಕುರಿತು ಕಾರ್ಯಾಗಾರ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಮಾ.27ರಂದು ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟಕ ಪ್ರಕಾಶ್ ಮೂಡಿತ್ತಾಯ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಯು.ವಿಜಯರಾಘವ ಪಡ್ವೆನ್ನಾಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ತುಳು ಸಾಹಿತ್ಯ ಅಕಾಡಮಿ ಸದಸ್ಯ ಕೆ.ಟಿ.ವಿಶ್ವನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ ಮತ್ತು ನಮ್ಮ ತುಳು ಭಾಷೆ, ಆಚರಣೆ ಕುರಿತು ಚಾವಡಿ ಚರ್ಚೆ ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ ಎಂದವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಿವಳ್ಳಿ ಸಂಪನ್ನದ ಅಧ್ಯಕ್ಷ ರಮೇಶ್ ಸೋಮಯಾಗಿ, ಸದಸ್ಯ ಗಿರೀಶ ಕೇಕುಣ್ಣಾಯ, ಬೃಂದಾವನ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಶ್ರೀ ಕೃಷ್ಣ ಉಪಸ್ಥಿತರಿದ್ದರು.