‘ಯುವಜನತೆ ಮತ್ತು ಪ್ರಜಾತಂತ್ರಕ್ಕಾಗಿ ಅಂಬೇಡ್ಕರ್’ ಅಭಿಯಾನ ಇಂದು ಸಮಾರೋಪ
Update: 2016-03-25 18:34 GMT
ಮಂಗಳೂರು, ಮಾ.25: ಅಂಬೇಡ್ಕರ್ ಅಧ್ಯಯನ ಕೇಂದ್ರವು ರಾಜ್ಯಾದ್ಯಂತ ‘ಯುವಜನತೆ ಮತ್ತು ಪ್ರಜಾತಂತ್ರಕ್ಕಾಗಿ ಅಂಬೇಡ್ಕರ್’ ಅಭಿಯಾನವನ್ನು ನಡೆಸಿದೆ. ಈ ಅಭಿಯಾನದ ಭಾಗವಾಗಿ ದ.ಕ. ಜಿಲ್ಲಾದ್ಯಂತ ನಡೆದ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ಮಾ.26ರಂದು ನಗರದಲ್ಲಿ ನಡೆಯಲಿದೆ. ಅಭಿಯಾನದ ಅಂಗವಾಗಿ ಬೆಳಗ್ಗೆ 10ಕ್ಕೆ ವೆಲೆನ್ಸಿಯಾದಲ್ಲಿರುವ ರೋಶನಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಅಪರಾಹ್ನ 2ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮಂಗಳೂರು ವಿ.ವಿ.ಯ ಎನ್ನೆಸ್ಸೆಸ್ ಸಂಯೋಜಕಿ ಪ್ರೊ. ವಿನೀತಾ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಳ್ಳಾರಿಯ ಸಮಾಜ ಅಧ್ಯಯನ ಕೇಂದ್ರದ ಪೀರ್ ಬಾಷಾ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.