ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಯು.ಟಿ. ತೌಸೀಫ್
Update: 2016-03-30 12:38 GMT
ಉಪ್ಪಿನಂಗಡಿ: ದ.ಕ. ಜಿಲ್ಲಾ ಯುವ ಕಾಂಗ್ರೆಸ್ನ ಕಾರ್ಯದರ್ಶಿಯಾಗಿ ಮುಹಮ್ಮದ್ ತೌಸೀಫ್ ಯು.ಟಿ. ತೌಸೀಫ್ ಅವರನ್ನು ನೇಮಕಗೊಳಿಸಿ ಯುವ ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ಮಿಥುನ್ ರೈ ಆದೇಶ ಹೊರಡಿಸಿದ್ದಾರೆ.
ಉಪ್ಪಿನಂಗಡಿಯ ಯುವ ಉದ್ಯಮಿಯಾಗಿರುವ ಯು.ಟಿ. ತೌಸೀಫ್ ಅವರು ಪ್ರಸ್ತುತ ಪಂಚಾಯತ್ ಸದಸ್ಯರಾಗಿದ್ದು, ಎನ್ಎಸ್ಯುಐ ಪುತ್ತೂರು ತಾಲೂಕು ಅಧ್ಯಕ್ಷರಾಗಿ, ಉಪ್ಪಿನಂಗಡಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ, ಇಂಡಿಯನ್ ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ನ ಪುತ್ತೂರು ತಾಲೂಕು ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದಲ್ಲದೇ, 2 ಬಾರಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ, ನೇತ್ರಾವತಿ ನದಿ ತಿರುವು ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ.