ಪುತ್ತೂರು: ಮನೆಯಂಗಳ ಪ್ರವೇಶಿಸಿ ಜೀವಬೆದರಿಕೆ-ದೂರು
Update: 2016-03-31 12:28 GMT
ಪುತ್ತೂರು: ರಾತ್ರಿ ವೇಳೆಯಲ್ಲಿ ಮನೆಯಂಗಳಕ್ಕೆ ಬಂದು ಪಟಾಕಿ ಸಿಡಿಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಚಿಕ್ಕಮುಡ್ನೂರು ಗ್ರಾಮದ ಬಡಾವು ನಿವಾಸಿ ನಗರಸಭಾ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ ಶೆಟ್ಟಿ ಅವರ ಮನೆಯ ಅಂಗಳಕ್ಕೆ ಬುಧವಾರ ರಾತ್ರಿ ತಿಂಗಳಾಡಿ ನಿವಾಸಿ ಶಶಿಧರ ನಾಕ್ ಎಂಬಾತನು ಅಕ್ರಮ ಪ್ರವೇಶ ಮಾಡಿ ಮನೆಯ ಅಂಗಳದಲ್ಲಿ ಪಟಾಕಿ ಸಿಡಿಸಿ ಜೀವ ಬೆದರಿಕೆ ಒಡ್ಡಿರುವುದಾಗಿ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿಯವರ ಪತ್ನಿ ಹರಿಣಾಕ್ಷಿ ಜೆ. ಶೆಟ್ಟಿ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
ನಗರಸಭಾ ಸದಸ್ಯತ್ವ ಅನರ್ಹತೆಯನ್ನು ರಾಜ್ಯ ಉಚ್ಛ ನ್ಯಾಯಾಲಯ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ವಿರೋಧಿ ಗುಂಪಿನವನಾದ ಆರೋಪಿ ಈ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.