ಪಪಂ, ಗ್ರಾಪಂ ಉಪ ಚುನಾವಣೆ; ಕಾಂಗ್ರೆಸ್ಗೆ ಪೂರಕ ವಾತಾವರಣ
ಮಂಗಳೂರು.ಎ.1: ಕೋಟೆಕಾರ್ ಮತ್ತು ವಿಟ್ಲ ಪಟ್ಟಣ ಪಂಚಾಯತ್ ಹಾಗೂ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳ ತೆರವಾದ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಪಕ್ಷಕ್ಕೆ ಪೂರಕ ವಾತಾವರಣವಿದೆ ಎಂದು ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹೀಂ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದಾರೆ.ದೇವರಾಜ ಅರಸು ಬಳಿಕ ಕರ್ನಾಟಕದಲ್ಲಿ ಜನಸಾಮಾನ್ಯರ ಬಗೆಗೆ ಅತ್ಯಂತ ಹೆಚ್ಚು ಕಾಳಜಿ ಹೊಂದಿರುವ, ಅವರ ಪರವಾದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಜನರ ಒಲವು ಇರುವುದರಿಂದ ಈ ಬಾರಿ ಜಿಲ್ಲೆಯಲ್ಲಿ ನಡೆಯಲಿರುವ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸ್ಥಾನಗಳ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪರ ಮತಚಲಾಯಿಸಲಿದ್ದಾರೆ ಎಂದು ಇಬ್ರಾಹೀಂ ಕೋಡಿಜಾಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸದಾಶಿವ ಉಳ್ಳಾಲ್, ಕೆ. ಅಶ್ರಫ್,ನಾಗೇಂದ್ರ, ಸುಭೋದ್ ಆಳ್ವಾ, ಶರೀಫ್, ಪದ್ಮಶೇಖರ ಜೈನ್, ನಝೀರ್ ಬಜಾಲ್,ವಿಶ್ವಾಸ್ ದಾಸ್ ಉಪಸ್ಥಿತರಿದ್ದರು.