ಮಂಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ

Update: 2016-04-02 05:38 GMT

ಮಂಗಳೂರು, ಎ.2: ನಗರದ ಡಿಎಆರ್ ಮೈದಾನದಲ್ಲಿ ಇಂದು ಬೆಳಗ್ಗೆ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೇಖರಪ್ಪ ಅವರು ಪೊಲೀಸ್ ಧ್ವಜ ಬಿಡುಗಡೆಗೊಳಿಸಿದರು. 

ಈ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 

ಕಾರ್ಯಕ್ರಮದಲ್ಲಿ  ಎಸ್ಸೆಸ್ಸೆಲ್ಸಿ , ಪಿಯುಸಿ , ಎಂಜಿನಿಯರಿಂಗ್ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ  ಪೊಲೀಸ್ ಸಿಬ್ಬಂದಿಗಳ ಮಕ್ಕಳಿಗೆ ದಿವಂಗತ ಬೋಳ ಪುಸ್ಪರಾಜ್ ಶೆಟ್ಟಿ ಅವರ ಸ್ಮರಣಾರ್ಥ ನಗದು ಬಹುಮಾನವನ್ನು ಅವರ ಸಹೋದರಿ ನಳಿನಿ ಎಸ್ ಭಂಡಾರಿ ವಿತರಿಸಿದರು. 

ಕಾರ್ಯಕ್ರಮದ ಆರಂಭದಲ್ಲಿ ಪೊಲೀಸರ ಆಕರ್ಷಕ ಕವಾಯತು ನಡೆಯಿತು. ಸಮಾರಂಭದಲ್ಲಿ ಪಶ್ಚಿಮ ವಲಯ ಐಜಿಪಿ ಅಮೃತ್ ಪಾಲ್ , ಮಂಗಳೂರು ಪೊಲೀಸ್ ಕಮಿಷನರ್ ಚಂದ್ರಶೇಖರ್ ಎಮ. , ದ.ಕ. ಜಿಲ್ಲಾ ಎಸ್ಲಿ ಡಾ. ಶರಣಪ್ಪ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News