ಪುತ್ತೂರು: ಅಪ್ರಾಪ್ತೆಯ ಮಾನಭಂಗ ಯತ್ನ - ಇಬ್ಬರು ಆರೋಪಿಗಳ ಬಂಧನ

Update: 2016-04-02 13:00 GMT

ಪುತ್ತೂರು: ಬನ್ನೂರು ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಪೋಕ್ಸೋ ಕಾಯಿದೆಯಡಿ ಪುತ್ತೂರು ನಗರ ಪೊಲೀಸರಿಂದ ಬಂಧಿತರಾದ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುತ್ತೂರು ತಾಲೂಕಿನ ಸೇಡಿಯಾಪು ಗ್ರಾಮದ ಶ್ರೀಧರ ಮತ್ತು ಬೆಳ್ತಂಗಡಿ ತಾಲೂಕಿನ ಬೂಡುಜಾಲು ನಿವಾಸಿ ರಾಜೇಶ ನ್ಯಾಯಾಂಗ ಬಂಧನಕ್ಕೆ ಒಳಗಾದ ಆರೋಪಿಗಳು. ಬಂಧಿತ ಆರೋಪಿಗಳನ್ನು ಮಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಇಬ್ಬರು ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಗಳಿಬ್ಬರು ಸೇಡಿಯಾಪು ಅಡೆಂಜಿನಡ್ಕ ನಿವಾಸಿ ಅಪ್ತಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಚಾರಕ್ಕೆ ಯತ್ನಿಸಿರುವುದಾಗಿ ಆಕೆಯ ತಾಯಿ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು. ದೂರಿನಂತೆ ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರ ವಿರುದ್ದ ಸೆ.362 ಅಪಹರಣ, ಸೆ. 376 ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ(ಪೊಕ್ಸೋ) ಕಾಯಿದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News