ಬಾಂಬಿಲದಲ್ಲಿ ಬಸ್ಗೆ ಕಾರು ಢಿಕ್ಕಿ: ನಾಲ್ವರಿಗೆ ಗಾಯ
Update: 2016-04-02 18:34 GMT
ವಿಟ್ಲ, ಎ.2: ಕೆಎಸ್ಸಾರ್ಟಿಸಿ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಗಾಯಗೊಂಡ ಘಟನೆ ತಾಲೂಕಿನ ಕಾವಳಪಡೂರು ಗ್ರಾಮದ ಬಾಂಬಿಲ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.
ಗಾಯಾಳುಗಳನ್ನು ತಕ್ಷಣ ಸ್ಥಳೀಯರು ತುಂಬೆ ಖಾಸಗಿ ಆಸ್ಪತ್ರೆಗೆ ದಾಖ ಲಿಸಿದ್ದಾರೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಬಾಂಬಿಲ ಬಳಿ ಎದುರಿನಿಂದ ಅತಿ ವೇಗದಿಂದ ಬರು ತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ನ ಮುಂಭಾಗದ ಗಾಜು ಪುಡಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾ ಪಾಯ ಸಂಭವಿಸಿಲ್ಲ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಬಂಟ್ವಾಳ ಟ್ರಾಫಿಕ್ ಪೊಲೀಸರು ಎರಡೂ ವಾಹನಗಳನ್ನು ಹೆದ್ದಾರಿಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.