ಜ್ಯುವೆಲ್ಲರಿ ಶೂಟೌಟ್ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Update: 2016-04-02 18:36 GMT

ಪುತ್ತೂರು, ಎ.2: ನಗರದ ರಾಜಧಾನಿ ಜ್ಯುವೆಲ್ಲರ್ಸ್‌ಗೆ ಗುಂಡು ಹಾರಿಸಿದ ಪ್ರಕರಣದ ಆರೋಪಿ ಕಾಸರಗೋಡು ಮೊಗ್ರಾಲ್ ನಿವಾಸಿ ಅಬ್ದುಲ್ ಆಸಿರ್‌ನನ್ನು ಶನಿವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಎ.4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸೋಮವಾರ ಆರೋಪಿಯನ್ನು ಮತ್ತೊಮ್ಮೆ ಪುತ್ತೂರು ನಗರ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಯ ಮೇಲೆ ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪ ಮತ್ತು ಹಫ್ತಾಕ್ಕಾಗಿ ಗುಂಡು ಹಾರಾಟದ ಆರೋಪವಿದ್ದು, ರಾಜಧಾನಿ ಜ್ಯುವೆಲ್ಲರ್ಸ್‌ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿರುವುದರಿಂದ ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News