ಪೊಯಿನಾಚಿ: ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ, 17 ಮಂದಿಗೆ ಗಾಯ

Update: 2016-04-03 03:04 GMT

ಕಾಸರಗೋಡು, ಎ.3: ಟ್ರಾವೆಲ್ಲರ್ ವಾಹನ ಮತ್ತು ಲಾರಿಯೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 17 ಮಂದಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯ ಪೊಯಿನಾಚಿಯಲ್ಲಿ ನಡೆದಿದೆ.
ಮೃತಪಟ್ಟವರ ಪೈಕಿ ಓರ್ವನನ್ನು ತೃಕ್ಕರಿಪುರದ ಅಜಿತ್(28) ಎಂದು ಗುರುತಿಸಲಾಗಿದೆ. ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಹಲವಾರು ಮಂದಿ ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.
 ಗಾಯಗೊಂಡವರಲ್ಲಿ ಪಳ್ಳಿಕೆರೆಯ ಮಠದ ಸತೀಶ್(22), ಶಾಜಿ(27), ರಮ್ಯಾ, ರೇಷ್ಮಾ, ಸುಮಿತ್ ಸೇರಿದ್ದು, ಉಳಿದವರ ಬಗ್ಗೆ ಮಾಹಿತಿ ಲಭಿಸಿಲ್ಲ.

  ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಡೆಯಿಂದ ತೃಕ್ಕರಿಪುರಕ್ಕೆ ತೆರಳುತ್ತಿದ್ದ ಟ್ರಾವಲ್ಲರ್ ಮತ್ತು ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.
ಅಪಘಾತದ ಬಳಿಕ ಈ ದಾರಿಯಾಗಿ ಸುಮಾರು ಸಮಯ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News