ಎ.6: ಮೈಸೂರು ವಿಭಾಗ ಮಟ್ಟದ ಸರಕಾರಿ ನೌಕರರ ಸಮ್ಮೇಳನ

Update: 2016-04-03 18:09 GMT

 ಉಡುಪಿ, ಎ.3: ಮೈಸೂರು ವಿಭಾಗೀಯ ಮಟ್ಟದ ಸರಕಾರಿ ನೌಕರರ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಆಡಳಿತ ಕಾರ್ಯಗಾರವು ಎ.6ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಸಮ್ಮೇಳನದ ಅಧ್ಯಕ್ಷತೆಯನ್ನು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಬಿ.ಪಿ.ಮಂಜೇಗೌಡ ವಹಿಸುವರು. ಸರಕಾರ ನೌಕರರಿಗಾಗಿ ಜಾರಿಗೆ ತಂದಿರುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಬೆಂಗಳೂರಿನ ಸುವರ್ಣ ಆರೋಗ್ಯ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ. ಬೋರೇಗೌಡ ನಡೆಸಿಕೊಡಲಿದ್ದಾರೆ.

ಸೇವೆಯಲ್ಲಿ ಕಾರ್ಯದಕ್ಷತೆ ಹೆಚ್ಚಳ ಕುರಿತು ಹಳ್ನಾಡು ಪ್ರತಾಪ್ ಚಂದ್ರ ಶೆಟ್ಟಿ ಮಾಹಿತಿ ನೀಡಲಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲಾ ಸರಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News