ರಕ್ತದಾನದ ಕುರಿತ ತಪ್ಪುಕಲ್ಪನೆ ದೂರವಾಗಲಿ: ಜಯಕರ ಶೆಟ್ಟಿ
ಉಡುಪಿ, ಎ.3: ರಕ್ತದಾನದಿಂದ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗದು. ರಕ್ತದಾನ ಕುರಿತ ಜನರಲ್ಲಿರುವ ತಪ್ಪು ಕಲ್ಪನೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಜಾಗೃತಿ ಕಾರ್ಯ ಅಗತ್ಯವಾಗಿ ಆಗಬೇಕಿದೆ ಎಂದು ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.
ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾಗೂ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸಹಯೋಗದೊಂದಿಗೆ ಕಾಲೇಜಿನಲ್ಲಿ ರವಿವಾರ ಏರ್ಪಡಿಸಲಾದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೈದ್ಯಾಧಿಕಾರಿ ಡಾ.ಮಲ್ಲಿ ಎಚ್.ಎ. ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಎಸ್.ರಮೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಅಧ್ಯಕ್ಷ ಎಸ್.ಜಯಕರ ಶೆಟ್ಟಿ, ಇಂದ್ರಾಳಿ ಲಯನ್ಸ್ ಕ್ಲಬ್ನ ವಿನಯ್ ಭೂಷನ್ ಹೆಗ್ಡೆ, ಬಬಿತಾ ಹೆಗ್ಡೆ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ರಮಾನಂದ ರಾವ್ ಸ್ವಾಗತಿಸಿದರು. ಮಲ್ಲಿಕಾ ವಂದಿಸಿದರು. ವಿದ್ಯಾರ್ಥಿನಿ ನಿಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.