ಇಂದು ಡಾ.ಎ.ಜೆ.ಶೆಟ್ಟಿಗೆ ಸನ್ಮಾನ
ಮಂಗಳೂರು, ಎ.4: ಶಿಕ್ಷಣ, ಸಮಾಜ ಸೇವೆ ಮತ್ತು ಧಾರ್ಮಿಕ ಕ್ಷೇತ್ರದ ಸಾಧಕ, ಉದ್ಯಮಿ ಎ.ಜೆ. ಶೆಟ್ಟಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಲಭಿಸಿದ ಪ್ರಯುಕ್ತ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಗರದ ಬಲ್ಮಠದಲ್ಲಿರುವ ಕುಡ್ಲ ಪೆವಿಲಿಯನ್ನಲ್ಲಿ ಎ.5ರಂದು ಸಂಜೆ 5:30ಕ್ಕೆ ಸನ್ಮಾನ ಸಮಾರಂಭ ಜರಗಲಿದೆ.
ಟ್ರಸ್ಟ್ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗುವ ಸಮಾರಂಭದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯ ಕುಲಾಧಿಪತಿ ಡಾ. ಎನ್. ವಿನಯ ಹೆಗ್ಡೆ ಸನ್ಮಾನಿಸುವರು. ರವೀಂದ್ರನಾಥ ಜಿ. ಹೆಗ್ಡೆ ಪಡುಬಿದ್ರಿ, ಶೆಡ್ಡೆ ಮಂಜುನಾಥ ಭಂಡಾರಿ, ಸವಣೂರು ಸೀತಾರಾಮ ರೈ, ಜಯಕರ ಶೆಟ್ಟಿ ಇಂದ್ರಾಳಿ, ಕೋಲಾರ್ ಸತೀಶ್ಚಂದ್ರ ಭಂಡಾರಿ, ಸುಧೀರ್ ಹೆಗ್ಡೆ ಕಾರ್ಕಳ, ರಘುರಾಮ ಶೆಟ್ಟಿ ಬೆಳ್ತಂಗಡಿ, ಅಭಿನಂದನ್ ಶೆಟ್ಟಿ ಕುಂದಾಪುರ ಅತಿಥಿಗಳಾಗಿರುವರು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಸಂಸದ ನಳಿನ್ಕುಮಾರ್ ಕಟೀಲು, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಆಳ್ವಾಸ್ ಪ್ರತಿಷ್ಠಾನದ ಡಾ.ಎಂ.ಮೋಹನ್ ಆಳ್ವ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಡಾ.ಮಂಜುನಾಥ ಭಂಡಾರಿ ಮತ್ತಿತರರು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.