ಬಂಟ್ಸ್ ವೆಲ್ಫೇರ್ ಟ್ರಸ್ಟ್‌ನಿಂದ ಡಾ.ಎ.ಜೆ.ಶೆಟ್ಟಿಗೆ ಸನ್ಮಾನ

Update: 2016-04-05 18:42 GMT

ಮಂಗಳೂರು, ಎ.5: ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶಿಕ್ಷಣ, ಸಮಾಜ ಸೇವೆ ಮತ್ತು ಧಾರ್ಮಿಕ ಕ್ಷೇತ್ರದ ಮುಂದಾಳು ಡಾ.ಎ.ಜೆ.ಶೆಟ್ಟಿಗೆ ಇಂಟರ್ ನ್ಯಾಶನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.
ಕುಡ್ಲ ಫೆವಿಲಿಯನ್ ಸಭಾಂಗಣದಲ್ಲಿ ಟ್ರಸ್ಟ್ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನಿಟ್ಟೆ ವಿವಿ ಕುಲಾಧಿಪತಿ ಡಾ.ಎನ್.ವಿನಯ ಹೆಗ್ಡೆ ಸನ್ಮಾನಿಸಿದರು.

ಸಮಾರಂಭದಲ್ಲಿ ಜಿಲ್ಲಾ ಉಸ್ತು ವಾರಿ ಸಚಿವ ಬಿ.ರಮಾನಾಥ ರೈ ಮಾತನಾಡುತ್ತಾ, ಎ.ಜೆ.ಶೆಟ್ಟಿಯವರು ತಮ್ಮ ಸ್ವಂತ ಪರಿಶ್ರಮದಿಂದ ಸಾಮಾನ್ಯ ವ್ಯಕ್ತಿಯಾಗಿದ್ದವರು ಉನ್ನತ ಮಟ್ಟಕ್ಕೆ ಏರಿದ್ದಾರೆ. ಜಿಲ್ಲೆ ಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಮೂಲಕ ತಮ್ಮ ಸಾಮಾಜಿಕ ಮತ್ತು ಸಾರ್ವಜನಿಕ ಬದುಕಿನ ಕ್ರೀಯಾಶೀಲತೆಯನ್ನು ವ್ಯಕ್ತ ಪಡಿಸಿದ್ದಾರೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಶುಭ ಹಾರೈಸಿದರು. ಮಾಜಿ ಸಚಿವ ಅಮರನಾಥ ಶೆಟ್ಟಿ,ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಅಧ್ಯಕ್ಷ ಅಪ್ಪಣ್ಣ ಹೆಗ್ಡೆ, ಶ್ರೀನಾಥ ಹೆಗ್ಡೆ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ, ಶೆಡ್ಡೆ ಮಂಜುನಾಥ ಭಂಡಾರಿ, ಸವಣೂರು ಸೀತಾರಾಮ ರೈ, ಪಾದೆ ಅಜಿತ್ ಶೆಟ್ಟಿ, ಮಿಥುನ್ ರೈ ಮೊದಲಾದವರು ಉಪಸ್ಥಿತರಿದ್ದರು.
ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ ಭಾಷಣ ಮಾಡಿದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಾಜಗೋಪಾಲ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News