ವಿಟ್ಲ : ಎ, 10 ರಂದು ಕಾರಾಜೆಯಲ್ಲಿ ಸ್ವಲಾತ್ ವಾರ್ಷಿಕ

Update: 2016-04-08 13:10 GMT

ವಿಟ್ಲ : ನೂರುಲ್ ಹುದಾ ಜುಮಾ ಮಸೀದಿ ಕಾರಾಜೆ ಇದರ ಆಶ್ರಯದಲ್ಲಿ 13ನೇ ಸ್ವಲಾತ್ ವಾರ್ಷಿಕ ಕಾರ್ಯಕ್ರಮವು ಎ 10 ರಂದು ಇಲ್ಲಿನ ಮಸೀದಿ ವಠಾರದಲ್ಲಿರುವ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಸಯ್ಯಿದ್ ಫಝಲ್ ಜಮಲುಲ್ಲೈಲಿ ತಂಙಳ್ ಸರಬಬೈಲು ನೇತೃತ್ವದಲ್ಲಿ ನಡೆಯುವ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮವನ್ನು ಎನ್.ಎ. ಅಬ್ದುಲ್ ರಹಿಮಾನ್ ಮದನಿ ಉದ್ಘಾಟಿಸುವರು. ಸ್ಥಳೀಯ ಖತೀಬ್ ಯೂಸುಫ್ ಮದನಿ ಅಧ್ಯಕ್ಷತೆ ವಹಿಸುವರು. ಈ ಪ್ರಯುಕ್ತ ಹಮ್ಮಿಕೊಂಡ ಮೂರು ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಎ 8 ರಂದು ಫಾರೂಕ್ ಸಖಾಫಿ ಕೃಷ್ಣಾಪುರ ಉಪನ್ಯಾಸಗೈದಿದ್ದು, ಇಂದು (ಎ 9) ರಾತ್ರಿ ಉಸ್ಮಾನ್ ಜೌಹರಿ ನೆಲ್ಯಾಡಿ ಧಾರ್ಮಿಕ ಉಪನ್ಯಾಸ ನೀಡಲಿರುವರು ಎಂದು ಮಸೀದಿ ಅಧ್ಯಕ್ಷ ಶೇಖಬ್ಬ ಹಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News