ಕಾರ್ಕಳ: ಪ್ರತ್ಯೇಕ ಪ್ರಕರಣ, ಇಬ್ಬರು ನೇಣು ಬಿಗಿದು ಆತ್ಮಹತ್ಯೆ

Update: 2016-04-09 14:52 GMT

ಕಾರ್ಕಳ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೆಬ್ರಿ ಸಮೀಪದ ಶಿವಪುರ ಗಾಳಿಗುಡ್ಡೆ ನಿವಾಸಿ ಗಿರಿಯ ನಾಯ್ಕೆ(60) ಎಂಬವರು ತಮ್ಮ ಮನೆಯ ಬಚ್ಚಲು ಕೋಣೆಯಲ್ಲಿ ಗುರುವಾರ ಮಧ್ಯಾಹ್ನದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಪುರ ಗ್ರಾಮ ಖಜಾನೆ ಎಂಬಲ್ಲಿ ರಾಜು ಶೆಟ್ಟಿ ಎಂಬವರು ತಮ್ಮ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡೂ ಪ್ರಕರಣದ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News