ಎ.16ರಂದು ಮಾಡನ್ನೂರಿಗೆ ನೌಶದ್ ಬಾಖವಿ

Update: 2016-04-13 08:17 GMT

ಪುತ್ತೂರು, ಎ.13: ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಪುತ್ತೂರು ತಾಲೂಕಿನ ಕಾವು ಸಮೀಪದ ಮಾಡನ್ನೂರಿನಲ್ಲಿ ಆರಂಭಿಸಲಾದ ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿ ವತಿಯಿಂದ ಮಾಡನ್ನೂರಿನಲ್ಲಿ ಎ.16ರಂದು ಎ.ಎಂ.ನೌಶದ್ ಬಾಖವಿ ಅವರ ಏಕದಿನ ಮತಪ್ರವಚನ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸ್ವಾಗತ ಸಮಿತಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ ತಿಳಿಸಿದ್ದಾರೆ.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಡನ್ನೂರು ಮಖಾಂ ಝಿಯಾರತ್‌ನೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪುತ್ತೂರು ಕೇಂದ್ರ ಮಸೀದಿಯ ಮುದರ್ರಿಸ್ ಸೈಯದ್ ಅಹ್ಮದ್ ಪೂಕೋಯ ತಂಙಳ್ ನೇತೃತ್ವದಲ್ಲಿ ಮಖಾಂ ಝಿಯಾರತ್ ನಡೆಯಲಿದೆ. ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿಯ ಅಧ್ಯಕ್ಷ ಬುಶ್ರಾ ಅಬ್ದುಲ್ ಅಝೀಝ್‌ಧ್ವಜಾರೋಹಣ ನೆರವೇರಿಸಲಿದ್ದಾರೆ. ಆ ಬಳಿಕ ಬುರ್ದಾ ಮಜ್ಲಿಸ್ ನಡೆಯಲಿದ್ದು, ಸಂಸ್ಥೆಯ ಗೌರವಾಧ್ಯಕ್ಷ ಕುಂಬೋಳ್ ಸೈಯದ್ ಅಲಿ ತಂಙಳ್ ದುಆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಪುತ್ತೂರು ತಾಲೂಕು ಮುಸ್ಲಿಮ್ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಎಸ್.ಇಬ್ರಾಹೀಂ ಕಮ್ಮಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಆರೋಗ್ಯ ಸಚಿವ ಯು.ಟಿ.ಖಾದರ್, ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಪಿ.ಬಿ.ಅಬ್ದುರ್ರಝಾಕ್ ಹಾಜಿ, ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಪತಿ ವೈ.ಅಬ್ದುಲ್ಲ ಕುಂಞಿ, ಕಾಞಂಗಾಡ್ ಸಂಯುಕ್ತ ಜಮಾಅತ್ ಅಧ್ಯಕ್ಷ ಮುಹಮ್ಮದ್ ಹಾಜಿ ಮೆಟ್ರೋ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News