ಎ.17: ಸವಲುತ್ತುಗಳ ಬಗ್ಗೆ ಕ್ರೈಸ್ತರಿಗೆ ಮಾಹಿತಿ ಶಿಬಿರ

Update: 2016-04-13 18:29 GMT

ಮಂಗಳೂರು, ಎ.13: ಅಲ್ಪಸಂಖ್ಯಾತರ ಕಲ್ಯಾಣ ಇಲಾ ಖೆಯ ವತಿಯಿಂದ ಕ್ರೈಸ್ತ ಅಲ್ಪಸಂಖ್ಯಾತರ ಸಮುದಾಯದ ವರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳು ಹಾಗೂ ಅವುಗಳನ್ನು ಪಡೆದು ಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಎ. 17ರಂದು ಮಾಹಿತಿ ಶಿಬಿರ ಹಮ್ಮಿ ಕೊಳ್ಳಲಾಗಿದೆ.
   ಅಂದು ಬೆಳಗ್ಗೆ ನಗರದ ಬಜ್ಜೋ ಡಿಯ ಶಾಂತಿ ಕಿರಣ್‌ನಲ್ಲಿ ನಡೆಯುವ ಶಿಬಿರದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕ್ರೈಸ್ತ ಅಲ್ಪಸಂಖ್ಯಾತ ಘಟಕದ ಸದಸ್ಯ ಭಾಸ್ಕರ್ ಚಂದನ್‌ಭಾಗವಹಿಸಲಿದ್ದಾರೆ. ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News