ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು
Update: 2016-04-14 14:45 GMT
ಕಾರ್ಕಳ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೈಪಾಸ್ ಆಭರಣ ಮೋಟಾರ್ಸ್ ಶೋರೂಂ ಮುಂಭಾಗದಲ್ಲಿ ಗುರುವಾರ ನಡೆದಿದೆ.
ಮೂಡುಬಿದಿರೆ ದರೆಗುಡ್ಡೆ ನಿವಾಸಿ ಪ್ರಾಂಕ್ಲೀನ್ ಡಿಕುನ್ಹ(26) ಮೃತಪಟ್ಟವರು. ಅವರು ಮಿಯ್ಯಾರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ. ಆತ ಮೂಡುಬಿದಿರೆ ಎಚ್ಡಿಎಫ್ಸಿ ಬ್ಯಾಂಕಿನಲ್ಲಿ ಸಹಾಯಕ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆತನಿಗೆ ಕಳೆದ ಒಂದು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.