ಉಳ್ಳಾಲ :ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು - ಆಸ್ಪತ್ರೆಯೆದುರು ಪ್ರತಿಭಟನೆ

Update: 2016-04-16 12:22 GMT

ಉಳ್ಳಾಲ, ಎ. 16: ಥೈರಾಯ್ಡಾ ಚಿಕಿತ್ಸೆಗೆಂದು ದಾಖಲಾಗಿದ್ದ ಮಹಿಳಾ ರೋಗಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ. ಆದರೆ ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ಘಟನೆಗೆ ಕಾರಣರಾದ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾರ್ವಜನಿಕರು ತೊಕ್ಕೊಟ್ಟಿನ ಸ್ಫೂರ್ತಿ ಕ್ಲಿನಿಕ್ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಸಮಿತಿಯ ರೋಹಿತ್, ಮಹಿಳೆಯ ಸಾವಿಗೆ ಆಸ್ಪತ್ರೆಯ ಬೇಜವಾಬ್ದಾರಿತನ ಮತ್ತು ವೈದ್ಯರ ನಿರ್ಲಕ್ಷ್ಯ ಧೋರಣೆ ಕಾರಣವಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.
 ತೊಕ್ಕೊಟ್ಟು ನಿವಾಸಿ ಸರಸ್ವತಿ ಎಂಬವರನ್ನು ಅನಾರೋಗ್ಯದ ನಿಮಿತ್ತ ದೇರಳಕಟ್ಟೆಯ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದರು. ಇದರಿಂದ ಕೆರಳಿದ ರೋಗಿಯ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಉಳ್ಳಾಲ ಠಾಣೆಗೆ ದೂರು ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News