ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಧರಣಿ
ಮಂಗಳೂರು, ಎ.18: ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ದ.ಕ. ಜಿಲ್ಲಾಧಿಕಾರಿಗಳ ಕಚೇರಿಯೆದುರು ಇಂದು ಬೆಳಗ್ಗೆ ಧರಣಿ ನಡೆಯಿತು.
ಸಿಐಟಿಯು ನೇತೃತ್ವದಲ್ಲಿ ಇಂದು ಹಮ್ಮಿಕೊಳ್ಳಲಾಗಿರುವ ರಾಜ್ಯವ್ಯಾಪಿ ಪ್ರತಿಭಟನೆಯ ಅಂಗವಾಗಿ ಮಂಗಳೂರಿನಲ್ಲೂ ಧರಣಿ ನಡೆಯಿತು.
ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಬಾರಿ ಧರಣಿ ನಡೆಸಿದಾಗ ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆಯುವುದಾಗಿ ಸರಕಾರ ತಿಳಿಸಿತ್ತು. ಅದರಂತೆ ಮುಖ್ಯಮಂತ್ರಿಯೊಂದಿಗೆ ಎಪ್ರಿಲ್ 11ರಂದು ನಿಗದಿಯಾಗಿದ್ದ ಸಭೆಯನ್ನು ಯಾವುದೇ ಮುನ್ಸೂಚನೆ ನೀಡದೆ ಹಠಾತ್ ರದ್ದುಗೊಳಿಸಲಾಗಿದೆ. ಇದನ್ನು ಖಂಡಿಸಿ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ರಾಜ್ಯವ್ಯಾಪಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಕಾರರು ತಿಳಿಸಿದರು.
ಧರಣಿಯನ್ನುದ್ದೇಶಿಸಿ ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ, ಸಿಪಿಎಂ ಮುಖಂಡರಾದ ಸುನೀಲ್ಕುಮಾರ್ ಬಜಾಲ್, ಸದಾಶಿವ, ಪದ್ಮಾವತಿ ಶೆಟ್ಟಿ, ಬಾಬು ದೇವಾಡಿಗ, ಪ್ರೇಮನಾಥ್ ಜಲ್ಲಿಗುಡ್ಡೆ ಮೊದಲಾದವರು ಮಾತನಾಡಿದರು.