ಅಪಘಾತ: ಪಾದಚಾರಿ ಮೃತ್ಯು

Update: 2016-04-18 18:28 GMT

  ಬ್ರಹ್ಮಾವರ, ಎ.18: ಹೇರೂರು ಗ್ರಾಮದ ಸುಪ್ರೀಮ್ ಫೀಡ್ಸ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ 12:45ರ ಸುಮಾರಿಗೆ ಏಸ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಸ್ಥಳೀಯ ನಿಾಸಿ ಶಂಕರ್ ಶೆಟ್ಟಿ ಎಂದು ಗುರುತಿಸ ಲಾಗಿದೆ. ಉಡುಪಿ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಏಸ್ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದ ಶಂಕರ್ ಶೆಟ್ಟಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News