ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2016-04-19 18:33 GMT

  ಕಾರ್ಕಳ, ಎ.19: ವೈಯಕ್ತಿಕ ಕಾರಣದಿಂದ ಮನನೊಂದ ಎರ್ಲಪಾಡಿ ಗ್ರಾಮದ ಬಾಗಿಕಂಬ್ಳಿ ನಿವಾಸಿ ಶ್ರೀಧರ ನಾಯಕ್(52) ಎಂಬವರು ಎ.18ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗೊಳ್ಳಿ: ನಾಡ ಗುಡ್ಡೆಯಂಗಡಿ ನಿವಾಸಿ ಸುಶೀಲ ಮಡಿವಾಳ್ತಿ ಎಂಬವರ ಮಗ ಮಂಜುನಾಥ ಮಡಿವಾಳ (33) ಎಂಬಾತ ಎ.18ರಂದು ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News