ಗೋಳಿತೊಟ್ಟು: ಟ್ಯಾಂಕರ್ ಢಿಕ್ಕಿ- ಬೈಕ್ ಸವಾರ ಮೃತ್ಯು
Update: 2016-04-22 09:27 GMT
ಪುತ್ತೂರು, ಎ. 22: ಬೈಕ್ ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ವಳಾಲು ಕರಿಂಬಿತ್ತಿಲು ನಿವಾಸಿ ಪೂವಪ್ಪ ಗೌಡ ಎಂಬವರ ಪುತ್ರ ಶಿವಾನಂದ (22) ಮೃತಪಟ್ಟ ವ್ಯಕ್ತಿ. ಶಿವಾನಂದ ಅವರು ಕುತ್ರಾಡಿ- ಹಾರ್ಪಳ ಶಾಸ್ತಾರೇಶ್ವರ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ತನ್ನ ಬೈಕ್ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಬಂದ ಟ್ಯಾಂಕರ್ ಮತ್ತು ಬೈಕ್ ಪರಸ್ಪರ ಢಿಕ್ಕಿಯಾಗಿತ್ತು. ಈ ಸಂದರ್ಭದಲ್ಲಿ ರಸ್ತೆಗೆಸೆಯಲ್ಪಟ್ಟ ಅವರು ಗಂಭೀರ ಗಾಯಗೊಂಡಿದ್ದರು. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.