ಉಸ್ತುವಾರಿ ಸಚಿವರ ಪ್ರವಾಸ

Update: 2016-04-22 12:55 GMT

ಮಂಗಳೂರುಎ.22: ಅರಣ್ಯ, ಪರಿಸರ, ಜೀವಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಏ. 23ರಂದು ಬೆಳಿಗ್ಗೆ 10 ಗಂಟೆಗೆ ಸಚಿವರ ಬಿ.ಸಿ.ರೋಡ್ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದು, ಬೆಳಿಗ್ಗೆ 11 ಗಂಟೆಗೆ ಮಂಗಳೂರು ಗಂಜಿಮಠದಲ್ಲಿ ನೂತನವಾಗಿ ರ್ನಿುಸಿರುವ ಸುಸಜ್ಜಿತ ಮೀನು ಮಾರುಕಟ್ಟೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

     ಅಪರಾಹ್ನ 3 ಗಂಟೆಗೆ ಮಂಗಳೂರು ಪುರಭವನದಲ್ಲಿ ಶಾಲೆ ಕಡೆ ನನ್ನ ನಡೆ ಶಿಕ್ಷಣ ನನ್ನ ಮೂಲಭೂತ ಹಕ್ಕು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಮಂಗಳೂರು ಪುರಭವನದಲ್ಲಿ ರಂಗಧ್ವನಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ವಿಟ್ಲಪಡ್ನೂರು ಗ್ರಾಮದ ಕುಕ್ಕಿಲ ಬದ್ರಿಯಾ ಜುಮ್ಮಾ ಮಸೀದಿ ಇದರ ನವೀಕೃತ ಕಟ್ಟಡ ಹಾಗೂ ಮದ್ರಸ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 7 ಕ್ಕೆ ಬಡಕಬೈಲ್‌ನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ನಲ್ಲಿ ವಿಜೇತ ಅಭ್ಯರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8.30 ಕ್ಕೆ ಆದಿ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನ, ಕೋರಿಯ, ಪುತ್ತೂರು ಇದರ ದೈವಗಳ ನೇಮೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News