ದೇಶ ವಿಭಜನೆಗೆ ಬಿಜೆಪಿ ಯತ್ನಿಸುತ್ತಿದೆ: ಮುಖ್ಯಮಂತ್ರಿ ಉಮ್ಮನ್ ಚಾಂಡಿ
Update: 2016-04-26 08:40 GMT
ಕಾಸರಗೋಡು, ಎ. 26: ದೇಶ ವಿಭಜನೆಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದರು.
ಅವರು ಇಂದು ಕಾಸರಗೋಡು ಪ್ರೆಸ್ ಕ್ಲಬ್ ನಲ್ಲಿ ಜನಸಭಾ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು .
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕಾಲ ಸನ್ನಿಹಿತವಾಗಿದೆ . ಕೋಮು ದ್ವೇಷ ಕೆರಳಿಸಿ ದೇಶದ ಐಕ್ಯತೆಯನ್ನು ಒಡೆಯಲು ಯತ್ನಿಸುತ್ತಿದೆ ಎಂದರು . ಸಿಪಿಎಂ ಜಾತ್ಯಾತೀತ ಮತಗಳನ್ನು ಒಡೆಯಲು ಯತ್ನಿಸುತ್ತಿದೆ.
ಬಿಹಾರದಲ್ಲಿ ಜಾತ್ಯಾತೀತ ಶಕ್ತಿಗಳು ಒಂದಾದಾಗ ಸಿಪಿಎಂ ಇದಕ್ಕೆ ಸಮ್ಮತಿಸದೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ 10 ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು .
ಚುನಾವಣಾ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಜಿಲ್ಲೆಗಾಗಮಿಸಿದ್ದು , ಪೆರ್ಲ , ಬದಿಯಡ್ಕ ಸೇರಿದಂತೆ ಐದು ಕಡೆ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳುವರು .